News & Updates

ಆರ್ಕಿಡ್ ಸಸ್ಯಗಳು ಪರಿಸರದ ಆರೋಗ್ಯವನ್ನುಸೂಚಿಸುತ್ತದೆ : ಪಾಂಡೀರ ಕೌಶಿಕ್ ಕಾವೇರಪ್ಪ.

ಪುತ್ತೂರು: ಭಾರತದಲ್ಲಿ ಆರ್ಕಿಡ್ ಗಳು ವಿಶಿಷ್ಟ ಸ್ಥಾನವನ್ನು
ಹೊಂದಿದೆ. ಆರ್ಕಿಡ್ ಗಿಡಗಳು ಸಸ್ಯಗಳ ಜಾತಿಯಲ್ಲಿ
ವಿಶೇಷವಾಗಿದ್ದು, ಎರಡನೆಯ ಅತಿ ಹೆಚ್ಚು ಪ್ರಬೇಧಗಳನ್ನು
ಹೊಂದಿರುವ ಸಸ್ಯಗಳಾಗಿವೆ. ಆರ್ಕಿಡ್ ಸಸ್ಯಗಳಲ್ಲಿ ಪರಾಗಸ್ಪರ್ಶವು
ಕಷ್ಟಕರವಾದ ಕ್ರಿಯೆಯಾಗಿದ್ದು, ಇವುಗಳನ್ನು
ಶ್ವಾಸಕೋಶ ಮತ್ತು ಕಿಡ್ನಿಗಳ ಸಮಸ್ಯೆಗೆ ಔಷಧಿಯಾಗಿ
ಬಳಸಲಾಗುತ್ತದೆ ಮತ್ತು ಆರ್ಕಿಡ್ ಸಸ್ಯಗಳು ಮಾಲಿನ್ಯ ಇರುವ
ಕಡೆಗಳಲ್ಲಿ ಕಾಣಸಿಗುವುದಿಲ್ಲ ಎಂದು ಪರಿಸರವಾದಿ ಪಾಂಡೀರ ಕೌಶಿಕ್
ಕಾವೇರಪ್ಪ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ
ಮಹಾವಿದ್ಯಾಲಯ ( ಸ್ವಾಯತ್ತ) ನೇಚರ್ ಕ್ಲಬ್,ಸೈನ್ಸ್
ಅಸೋಸಿಯೇಷನ್ ಮತ್ತು ಐಕ್ಯೂಎಸಿ ಜಂಟಿ ಆಶ್ರಯದಲ್ಲಿ ನಡೆದ
ಕೊಡಗಿನ ವರ್ಲ್ಡ್ ಆರ್ಕಿಡ್ ಗಳ ಕುರಿತ ಕನ್ನಡದ ಮೊದಲ ಸಾಕ್ಷ್ಯ
ಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ
ಭಾಗವಹಿಸಿ ಮಾತನಾಡಿದರು.
ವಿಜ್ಞಾನ ವಿಭಾಗದ ಡೀನ್ ಮತ್ತು ಐಕ್ಯೂಎಸಿ ಸಂಯೋಜಕ ಪ್ರೊ.
ಶಿವಪ್ರಸಾದ್ ಕೆ. ಎಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ
ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ
ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಶ್ರೀಕೃಷ್ಣ ಗಣರಾಜ್ ಭಟ್,
ನೇಚರ್ ಕ್ಲಬ್ ನ ಸಂಯೋಜಕ, ಪ್ರಾಣಿಶಾಸ್ತ್ರ ವಿಭಾಗದ
ಉಪನ್ಯಾಸಕ ಸುಹಾಸ್ ಕೃಷ್ಣ ಉಪಸ್ಥಿತರಿದ್ದರು.
ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಸೌಮಿತ್ರ. ಕೆ
ಸಹಕರಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಮನಸ್ವಿನಿ
ಸ್ವಾಗತಿಸಿ, ಅಶ್ವಥಿ ವಂದಿಸಿ, ಧನ್ಯಶ್ರೀ ನಿರ್ವಹಿಸಿದರು.

Related News

ವಿವೇಕಾನಂದ ಕಾಲೇಜಿನಲ್ಲಿ ಫುಡ್ ಕಾರ್ನಿವಲ್ ೨೦೨೪ ಉದ್ಘಾಟನೆ.

ವಿವೇಕಾನಂದ ಕಾಲೇಜಿನಲ್ಲಿ ಫುಡ್ ಕಾರ್ನಿವಲ್ ೨೦೨೪…

ಪುತ್ತೂರು: ಕಾಲೇಜು ದಿನಗಳಲ್ಲೇ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬೆಳೆಸುವುದು…

ರಾಷ್ಟ್ರ ಮಟ್ಟದ ಶಿಬಿರದಲ್ಲಿ ವಿವೇಕಾನಂದ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳ ಸಾಧನೆ.

ರಾಷ್ಟ್ರ ಮಟ್ಟದ ಶಿಬಿರದಲ್ಲಿ ವಿವೇಕಾನಂದ ಕಾಲೇಜಿನ…

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು…

ಆರ್ಕಿಡ್ ಸಸ್ಯಗಳು ಪರಿಸರದ ಆರೋಗ್ಯವನ್ನುಸೂಚಿಸುತ್ತದೆ : ಪಾಂಡೀರ ಕೌಶಿಕ್ ಕಾವೇರಪ್ಪ.

ಆರ್ಕಿಡ್ ಸಸ್ಯಗಳು ಪರಿಸರದ ಆರೋಗ್ಯವನ್ನುಸೂಚಿಸುತ್ತದೆ :…

ಪುತ್ತೂರು: ಭಾರತದಲ್ಲಿ ಆರ್ಕಿಡ್ ಗಳು ವಿಶಿಷ್ಟ ಸ್ಥಾನವನ್ನುಹೊಂದಿದೆ.…