News & Updates

ಯುವ ಜನತೆಯಲ್ಲಿ ಲಿಂಗ ಸೂಕ್ಷ್ಮತೆ_ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ

ಪುತ್ತೂರು.ಮೇ,30:
ಯುವ ಜನತೆಯಲ್ಲಿ ಆರೋಗ್ಯದ ಬಗ್ಗೆ ಅರಿವನ್ನು ಮೂಡಿಸುವುದರ ಜೊತೆಗೆ ತಮ್ಮ ದೇಹವನ್ನು ಹೇಗೆ ಸ್ವಚ್ಛವಾಗಿ ಇಟ್ಟುಕೊಳ್ಳಬಹುದೆಂದು ಅನೇಕ ಉದಾಹರಣೆಗಳನ್ನು ನೀಡಿ , ನಮ್ಮ ದೇಹಕ್ಕೆ ಯಾವ ರೀತಿಯ ಆಹಾರದ ಅಗತ್ಯವಿದೆ ಹಾಗೂ ಯಾವ ರೀತಿಯ ಆಹಾರವನ್ನು ಸೇವಿಸಬೇಕೆಂಬ ಸಲಹೆಯ ಜೊತೆಗೆ ದೇಹವನ್ನು ಸ್ವಚ್ಚಗೊಳಿಸದಿದ್ದರೆ ಏನೆಲ್ಲಾ ಅಪಾಯಗಳು ಸಂಭವಿಸುತ್ತದೆ ಎಂದು ಡಾ .ವಿಷ್ಣು ಕೀರ್ತಿ ಮಾಹಿತಿ ನೀಡಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ( ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ಸಮಾಜಶಾಸ್ತ್ರ ವಿಭಾಗ ಮತ್ತು ಮಹಿಳಾ ಕೋಶದ ವತಿಯಿಂದ ಯುವ ಜನತೆಯಲ್ಲಿ ಲಿಂಗ ಸೂಕ್ಷ್ಮತೆ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಆಯೋಜಿಸಿದ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ವೇದಿಕೆಯಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಹಾಗೂ ಕಾಲೇಜಿನ ಮಹಿಳಾ ಕೋಶದ ಸಂಯೋಜಕರಾದ ವಿದ್ಯಾ .ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ದ್ವಿತೀಯ ಬಿಎ ವಿಭಾಗದ ವಿದ್ಯಾರ್ಥಿಗಳಾದ ಯಶಸ್ವಿನಿ ಸ್ವಾಗತಿಸಿ,ಲಿಖಿತ್ ವಂದಿಸಿ ದರು ಹಾಗೂ ಶ್ರೇಯಾ ನಿರ್ವಹಿಸಿದರು.

Related News

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ಪುತ್ತೂರು, ಫೆ. ೦೨ : ನಮ್ಮನ್ನು ಯೋಚಿಸುವಂತೆ…

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್;

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ…

ಪುತ್ತೂರು: ರಾಮನನ್ನು ನಾವು ಸದಾ ನೆನಪಿಡಬೇಕಾದಅಗತ್ಯವಿದೆ. ಎಲ್ಲಾ…

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ಪುತ್ತೂರು: ನಾಯಕತ್ವ ಎನ್ನುವುದು ನಮ್ಮೊಳಗಿನಒಳ್ಳೆಯತನವನ್ನು ಹೊರಗೆ ತರುವ…