News & Updates

‘ಅಂಧಕಾರದಿoದ ಹೊರ ತರುವವನೇ ಗುರು’ವಿವೇಕಾನಂದ ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ;

ಪುತ್ತೂರು: ಅಂಧಕಾರವೆoಬ ಕತ್ತಲೆಯಿಂದ ನಮ್ಮನ್ನು
ಹೊರ ತರುವವನೇ ನಿಜವಾದ ಗುರು ಆಗಿರುತ್ತಾನೆ. ಭಾರತ
ಶ್ರೇಷ್ಠ ಗುರುಪರಂಪರೆಯುಳ್ಳ ದೇಶವಾಗಿದೆ. ಗುರು
ಭಕ್ತಿ ನಮ್ಮನ್ನು ಯಾವತ್ತೂ ಕಾಪಾಡುತ್ತದೆ. ಸತತ
ಅಭ್ಯಾಸಗಳಿಂದ ಜ್ಞಾನವೃದ್ದಿಯಾಗುತ್ತದೆ. ವಿದ್ಯೆಯಲ್ಲಿ ಸಿಗುವ
ಸುಖವನ್ನು ಅನುಭವಿಸಿದವರಿಗೆ ಮಾತ್ರ ತಿಳಿದಿರುವುದು &quoಣ; ಎಂದು
ಮದ್ರಾಸ್ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಮುಖ್ಯಸ್ಥ ಡಾ .
ರಾಧಾ ಕೃಷ್ಣನ್ ನಂಬೂದಿರಿ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ , ಮತ್ತು ವಾಣಿಜ್ಯ
ಮಹಾವಿದ್ಯಾಲಯ (ಸ್ವಾಯತ್ತ) ಇದರ ಭವಿಷ್ ಘಟಕ, ಕಲಾ ವಿಭಾಗ
,ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗ ,ವ್ಯವಹಾರ ನಿರ್ವಹಣಾ ವಿಭಾಗ
ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗ ಇದರ
ಸಹಯೋಗದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ
ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ
ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ವಸಂತ
ಮಾಧವ.ಟಿ, &quoಣ; ನಾವು ಪಡೆದ ಜ್ಞಾನವನ್ನು ಬೇರೆಯವರಿಗೆ
ಪ್ರಸಾರ ಮಾಡಬೇಕು. ಇದರಿಂದ ನಮ್ಮ ಜ್ಞಾನ
ವೃದ್ಧಿಯಾಗುತ್ತದೆ. ನಮ್ಮ ಕೌಶಲ್ಯದಿಂದ ನಾವು ಸಮಾಜದ
ಸಂಘಟನೆಯನ್ನು ಮಾಡಬೇಕು. &quoಣ; ಎಂದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ವಿಶ್ರಾಂತ
ಪ್ರಾAಶುಪಾಲ ಪ್ರೊ. ವೇದವ್ಯಾಸ ರಾಮಕುಂಜ ಗುರು ನಮನ
ಸ್ವೀಕರಿಸಿದರು. ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ
ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ, ಆಡಳಿತ ಮಂಡಳಿ
ಸAಚಾಲಕ ಮುರಳಿಕೃಷ್ಣ ಕೆ.ಎನ್ ಹಾಗೂ ಕಾಲೇಜಿನ
ಪ್ರಾಂಶುಪಾಲ ಡಾ.ಶ್ರೀಧರ್ ನಾಯ್ಕ ಬಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಭವಿಷ್ ಘಟಕದ ಸಂಯೋಜಕ
ಡಾ.ಪ್ರಮೋದ್ ಎಮ್.ಜಿ ಸ್ವಾಗತಿಸಿ,ಉಪಪ್ರಾಂಶುಪಾಲ ಪ್ರೊ.ಶ್ರೀ
ಕೃಷ್ಣಗಣರಾಜ್ ಭಟ್ ವಂದಿಸಿದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ
ಚೈತನ್ಯ ಚಂದಪ್ಪ ನಿರೂಪಿಸಿದರು.

Related News

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಜಾಗೃತಿ ಅಭಿಯಾನ;

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’…

ಪುತ್ತೂರು, ನ. 24; ನಶೆ ಮತ್ತು ಮದ್ಯವ್ಯಸನ…

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ. ರಾಜೇಶ್ವರಿ ಎಂ:ಇoಟರ್ನೆಟ್ ಆಫ್ ಥಿಂಗ್ಸ್ (ಐಓಟಿ) ಹ್ಯಾಂಡ್ಸ್-ಆನ್ ಕಾರ್ಯಾಗಾರ ಉದ್ಘಾಟನೆ;

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ.…

ಪುತ್ತೂರು ನ.24: ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಆಫ್…

ವಿವೇಕಾನಂದ ಕಾಲೇಜಿನಲ್ಲಿ ಪರಿಸರ ರಕ್ಷಣಾದಿನಾಚರಣೆ ಹಾಗೂ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಪರಿಸರ ರಕ್ಷಣಾದಿನಾಚರಣೆ ಹಾಗೂ…

ಪುತ್ತೂರು. ನ. 22: ಮನುಷ್ಯ ಯಾವಾಗ ನೈತಿಕ…