News & Updates

ವಿವೇಕಾನಂದ ಕಾಲೇಜಿನಲ್ಲಿ ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ

ಪುತ್ತೂರು; ಇಲ್ಲಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ
ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ,
ಐಕ್ಯೂಎಸಿ ಘಟಕ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್
ಸಹಯೋಗದಲ್ಲಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ವಾರ್ಷಿಕ
ಚಟುವಟಿಕೆಗಳ ಉದ್ಘಾಟನೆ ಮತ್ತು ಯುವ ಉದ್ಯಮಿಗಳೊಂದಿಗೆ
ಸAವಹನ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಹಿರಿಯ ವಿದ್ಯಾರ್ಥಿ, ಉದ್ಯಮಿ ಅನಂತ
ಕೃಷ್ಣ ಮುಳಿಯ ಉದ್ಯಮ, ವ್ಯಾಪಾರ ಮತ್ತು ಮಾರುಕಟ್ಟೆಯ
ಅಧ್ಯಯನದ ಕುರಿತು ತಿಳಿಸಿದರು. ತಮ್ಮ ಕುಟುಂಬದ ಉದ್ಯಮ
ವ್ಯವಹಾರ, ಅದು ಅವರಿಗೆ ನೀಡಿದ ಅನುಭವ ಮತ್ತು ತಮ್ಮ
ವ್ಯವಹಾರ ಪ್ರಕ್ರಿಯೆಯಗಳ ಕುರಿತು ಮಾತನಾಡಿ
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ವ್ಯವಹಾರ ನಿರ್ವಹಣೆ
ವಿಭಾಗದ ಮುಖ್ಯಸ್ಥೆ ರೇಖಾ.ಪಿ, ಶೈಕ್ಷಣಿಕ ಕಲಿಕೆಯೊಂದಿಗೆ
ವಿಭಾಗದಿAದ ನಡೆಯುವ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ
ವಿದ್ಯಾರ್ಥಿಗಳಿಗೆ ಅನೇಕ ಪ್ರಯೋಜನಗಳಿವೆ. ಶೈಕ್ಷಣಿಕವಾಗಿ
ಅಂಕಗಳಿಸುವುದರೊAದಿಗೆ ಹೆಚ್ಚಿನ ಗುಣಮಟ್ಟದ ಕಲಿಕೆ ಹಾಗೂ
ಸೃಜನಶೀಲ ಮತ್ತು ನವೀನ ಕಲ್ಪನೆಗಳು ವಿದ್ಯಾರ್ಥಿಗಳನ್ನು
ಉದ್ಯೋಗ ಹುಡುಕುವವರನ್ನಾಗಿ ಮಾಡದೆ, ಉದ್ಯೋಗ
ನೀಡುವವರನ್ನಾಗಿ ಮಾಡುತ್ತದೆ ಎಂದು ಕಿವಿಮಾತು ಹೇಳಿದರು.
ವೇದಿಕೆಯಲ್ಲಿ ವ್ಯವಹಾರ ನಿರ್ವಹಣೆ ವಿಭಾಗದ ಉಪನ್ಯಾಸಕಿ
ಅನ್ನಪೂರ್ಣ ಪಿ ಜಿ, ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ಅಧ್ಯಕ್ಷ
ತೃತೀಯ ಬಿಬಿಎ ವಿಭಾಗದ ಯಶಸ್ ಮತ್ತು ಕಾರ್ಯದರ್ಶಿ ತನೀಶಾ
ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ತೃತೀಯ ಬಿಬಿಎ ವಿಭಾಗದ
ವಿದ್ಯಾರ್ಥಿನಿಗಳಾದ ಅನುಜ್ಞಾ ಸ್ವಾಗತಿಸಿ, ಶ್ರಾವ್ಯ ವಂದಿಸಿ, ಭವ್ಯ
ನಿರ್ವಹಿಸಿದರು.

Related News

ವಿವೇಕಾನಂದರನ್ನು ನೆನೆದರೆ ಗುರು ಪರಂಪರೆಗೆ ಕೃತಜ್ಞತೆ ಸಲ್ಲಿಸಿದಂತೆ : ಡಾಧನಂಜಯ ಕುಂಬ್ಳೆ

ವಿವೇಕಾನಂದರನ್ನು ನೆನೆದರೆ ಗುರು ಪರಂಪರೆಗೆ ಕೃತಜ್ಞತೆ…

ಪುತ್ತೂರು, ಸೆ12: ವಿವೇಕಾನಂದರು ಒಬ್ಬ ಉತ್ತಮ ಕವಿ,…

ವಿವೇಕಾನಂದ ಕಾಲೇಜಿನಲ್ಲಿ 43 ನೇ ವರ್ಷದ ಶ್ರೀಗಣೇಶೋತ್ಸವ.ಮಣ್ಣು ಸೃಷ್ಟಿಯ ಕೊಡುಗೆ: ಡಾ. ಎಚ್. ಎನ್.ಉದಯಶಂಕರ

ವಿವೇಕಾನಂದ ಕಾಲೇಜಿನಲ್ಲಿ 43 ನೇ ವರ್ಷದ…

ಪುತ್ತೂರು.ಸೆ, 9:ಸಂಶೋಧನೆ ಮತ್ತು ಕೈಗಾರಿಕೆಗಳಿಂದ ಉತ್ಪತ್ತಿ ಮಾಡಲಾಗದ…

ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ)ನೆಹರೂ ನಗರ, ಪುತ್ತೂರು 43 ನೇ ವರ್ಷದ ಗಣೇಶೋತ್ಸವ ಆಚರಣೆ.

ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ)ನೆಹರೂ ನಗರ, ಪುತ್ತೂರು…

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘಪುತ್ತೂರು(ರಿ) ಇದರ…