News & Updates

ವಿವೇಕಾನಂದ ಕಾಲೇಜಿನಲ್ಲಿ 43 ನೇ ವರ್ಷದ ಶ್ರೀಗಣೇಶೋತ್ಸವ.ಮಣ್ಣು ಸೃಷ್ಟಿಯ ಕೊಡುಗೆ: ಡಾ. ಎಚ್. ಎನ್.ಉದಯಶಂಕರ

ಪುತ್ತೂರು.ಸೆ, 9:
ಸಂಶೋಧನೆ ಮತ್ತು ಕೈಗಾರಿಕೆಗಳಿಂದ ಉತ್ಪತ್ತಿ ಮಾಡಲಾಗದ ನಿಧಿ ಎಂದರೆ
ಅದು ಮಣ್ಣು.ತಂತ್ರಜ್ಞಾನ ಎಷ್ಟೇ ಮುಂದುವರೆದರು ಮಣ್ಣನ್ನು ಯಾರು
ಉತ್ಪದಿಸಲಾರರು. ಮಣ್ಣಿಗೆ ಅದರದೇ ಆದ ಮಹತ್ವವಿದೆ. ನಮ್ಮ ಸ್ವಾರ್ಥಕ್ಕಾಗಿ
ಪಶ್ಚಿಮ ಘಟ್ಟವನ್ನು ಹಾಳುಮಾಡುತ್ತಿದ್ದೇವೆ. ಅಭಿವೃದ್ಧಿ ಹೆಸರಿನಲ್ಲಿ
ಭೂಮಿಯನ್ನು ಕೆಡಿಸುತ್ತಿದ್ದೇವೆ.ಪ್ರಕೃತಿಯ ಮುಂದೆ ಯಾರು
ದೊಡ್ಡವರಲ್ಲ, ಮಣ್ಣು ಇಲ್ಲದೆ ಜೀವ ಇಲ್ಲ ಎಂದು ಮಣಿಪಾಲ ತಾಂತ್ರಿಕ
ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಭೂ ವಿಜ್ಞಾನಿ ಡಾ. ಎಚ್. ಎನ್
ಉದಯಶಂಕರ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (
ಸ್ವಾಯತ್ತ ) ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ. )ನರೇಂದ್ರ,
ನೆಹರು ನಗರ, ಪುತ್ತೂರು, ಇದರ ಆಶ್ರಯದಲ್ಲಿರುವ ವಿದ್ಯಾಸಂಸ್ಥೆಗಳಿAದ
ಆಚರಿಸಲಾದ 43 ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪ್ರಕೃತಿ
ಸಂರಕ್ಷಣೆ ನಮ್ಮೆಲರ ಹೊಣೆ ಉಪನ್ಯಾಸ ಕಾರ್ಯಗಾರ,ಕಾರ್ಯಕ್ರಮದಲ್ಲಿ
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಎಂ. ಕೃಷ್ಣ
ಭಟ್,ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವೆಲ್ಲರೂ ಪ್ರಕೃತಿಯ ಸೃಷ್ಟಿ ಎಂಬುದನ್ನು
ಮರೆತು ಭೂಮಾತೆಯ ಮೇಲೆ ನಮ್ಮ ದರ್ಪವನ್ನು ತೋರುತ್ತಿದ್ದೇವೆ.
ಭೂಮಿಯ ಶ್ವಾಸಕೋಶದಂತಿರುವ ಅರಣ್ಯವನ್ನು
ನಾಶಮಾಡುತ್ತಿದ್ದೇವೆ.ಭೂಮಿ ಯನ್ನು ಉಳಿಸುವುದು, ಅಳಿಸುವುದು ಎರಡು
ನಮ್ಮ ಕೈಯಲ್ಲಿದೆ ಹಾಗೆಯೇ ನಮ್ಮ ವಿನಾಶದ ಮಾರ್ಗವನ್ನು ನಾವೇ
ಕಂಡುಕೊಳ್ಳುತ್ತಿದ್ದೇವೆ ಎಂದು ನುಡಿದರು.
ದೀಪವನ್ನು ಪ್ರಜ್ವಲಿಸುವುದರ ಮೂಲಕ ಅತಿಥಿಗಳು ವೇದಿಕೆಯನ್ನು
ಅಲಂಕರಿಸಿದರು. ಗಣೇಶೋತ್ಸವ ಪ್ರಯುಕ್ತ ಆಯೋಜಿಸಿದ ಸ್ಪರ್ಧೆಯಲ್ಲಿ
ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ
ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಸ್ವಾಗತಿಸಿ,
ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾಲೇಜಿನ
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ವಂದಿಸಿ, ವಿವೇಕಾನಂದ
ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಶೃತಿ ಎಂ. ಎಸ್
ನಿರ್ವಹಿಸಿದರು.
ಬಾಕ್ಸ್ :-
 ಕಾರ್ಯಕ್ರಮದಲ್ಲಿ ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳ
ಪ್ರಾಯೋಗಿಕ ಪತ್ರಿಕೆ,ವಿಕಸನವನ್ನು ಬಿಡುಗಡೆಗೊಳಿಸಲಾಯಿತು.
 ಧಾರ್ಮಿಕ ಕಾರ್ಯಕ್ರಮದ ನಂತರದಲ್ಲಿ ಗಣೇಶೋತ್ಸವದ ಭವ್ಯ
ಶೋಭಾಯಾತ್ರೆ ನಡೆಯಿತು.

Related News

ವಿವೇಕಾನಂದರನ್ನು ನೆನೆದರೆ ಗುರು ಪರಂಪರೆಗೆ ಕೃತಜ್ಞತೆ ಸಲ್ಲಿಸಿದಂತೆ : ಡಾಧನಂಜಯ ಕುಂಬ್ಳೆ

ವಿವೇಕಾನಂದರನ್ನು ನೆನೆದರೆ ಗುರು ಪರಂಪರೆಗೆ ಕೃತಜ್ಞತೆ…

ಪುತ್ತೂರು, ಸೆ12: ವಿವೇಕಾನಂದರು ಒಬ್ಬ ಉತ್ತಮ ಕವಿ,…

ವಿವೇಕಾನಂದ ಕಾಲೇಜಿನಲ್ಲಿ 43 ನೇ ವರ್ಷದ ಶ್ರೀಗಣೇಶೋತ್ಸವ.ಮಣ್ಣು ಸೃಷ್ಟಿಯ ಕೊಡುಗೆ: ಡಾ. ಎಚ್. ಎನ್.ಉದಯಶಂಕರ

ವಿವೇಕಾನಂದ ಕಾಲೇಜಿನಲ್ಲಿ 43 ನೇ ವರ್ಷದ…

ಪುತ್ತೂರು.ಸೆ, 9:ಸಂಶೋಧನೆ ಮತ್ತು ಕೈಗಾರಿಕೆಗಳಿಂದ ಉತ್ಪತ್ತಿ ಮಾಡಲಾಗದ…

ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ)ನೆಹರೂ ನಗರ, ಪುತ್ತೂರು 43 ನೇ ವರ್ಷದ ಗಣೇಶೋತ್ಸವ ಆಚರಣೆ.

ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ)ನೆಹರೂ ನಗರ, ಪುತ್ತೂರು…

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘಪುತ್ತೂರು(ರಿ) ಇದರ…