News & Updates

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ.

ದೇಶದ ಮುಂದಿನ ಭವಿಷ್ಯದ ರೂವಾರಿಗಳು ನಮ್ಮ ವಿದ್ಯಾರ್ಥಿಗಳು – ಪ್ರೊ. ಪಿ.ಎಲ್. ಧರ್ಮ


ಪುತ್ತೂರು, ಮೇ.3: ವಿವೇಕಾನಂದ ಕಾಲೇಜು ಹಲವಾರುವರ್ಷಗಳಿಂದ ವಿವಿಧ ಪ್ರಯೋಗಗಳನ್ನು ಮಾಡಿ ಯಶಸ್ಸು ಕಂಡಿದೆ. ಪ್ರಸ್ತುತ ಸ್ವಾಯತ್ತ ಸಂಸ್ಥೆಯಾಗಿಮುನ್ನಡೆಯುತ್ತಿದೆ.ಕಾಲೇಜು ಈಗಾಗಲೇ ಬೆಳವಣಿಗೆ ಹೊಂದಿ,ಇನ್ನು ಹೊಸ ಹೊಸ ಪ್ರಯೋಗ ಗಳನ್ನು ಕಾಲೇಜುಮಾಡಬೇಕಿದೆ. ಜೊತೆಗೆ ಇಲ್ಲಿನ ವಿದ್ಯಾರ್ಥಿಗಳಲ್ಲಿ ಶಿಸ್ತು,ಉತ್ತಮ ಮೌಲ್ಯಗಳಿವೆ. ವಿದ್ಯಾರ್ಥಿ ಮತ್ತು ಅಧ್ಯಾಪಕ ಪರಂಪರೆಯನ್ನುಬೆಳೆಯಬೇಕು. ಇಂದಿನ ವಿದ್ಯಾರ್ಥಿ ಸಮೂಹವೇ ನಮ್ಮ ದೇಶದಮುಂದಿನ ಭವಿಷ್ಯದ ರೂವಾರಿಗಳು .ಆದ್ದರಿಂದ ನಾವೆಲ್ಲರುಒಗ್ಗಟ್ಟಾಗಿ ಶ್ರಮಿಸಬೇಕು. ಪರಸ್ಪರ ಗೌರವ ಕೊಡುವುದನ್ನುಬೆಳೆಸಿಕೊಳ್ಳೋಣ ಎಲ್ಲರಲ್ಲೂ ಸಮಾನತೆ ಕಾಣೋಣ ಎಂದುಮoಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್ ಧರ್ಮಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತುವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ನಡೆದ ಸಪ್ತಪರ್ಣೊತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ಅ ಧ್ಯಕ್ಷೀಯಮಾತುಗಳನ್ನಾಡಿ,ಹೊಸ ಚಿಂತನೆ ಹೊಸಕಲ್ಪನೆಯೊಂದಿಗೆ ಹಳೆಯ ಆಚರಣೆಗಳು ಮುನ್ನೆಲೆಗೆ ಬರಬೇಕು. ವಿದ್ಯಾರ್ಥಿ ಶಕ್ತಿ ರಾಷ್ಟ್ರ ಶಕ್ತಿ. ದೇಶದ ಭವಿಷ್ಯವನ್ನುನಿರ್ಧಾರ ಮಾಡುವ ವಿಶೇಷ ಚೈತನ್ಯ ಇವರಲ್ಲಿದೆ. ಈ ನಿಟ್ಟಿನಲ್ಲಿನಾವೆಲ್ಲರೂ ಒಂದಾಗೋಣ ಎಂದು ಹೇಳಿದರು.ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ,ಇಂದು ವಿದ್ಯಾರ್ಥಿಗಳು ಶಿಕ್ಷಣವಂತರಾಗುತ್ತಿದ್ದಾರೆ, ಆದರೆ ನಮ್ಮ ಮುಂದಿರುವ ಸಮಸ್ಯೆಅವರನ್ನು ಉದ್ಯೋಗಸ್ಥರನ್ನಾಗಿ ಮಾಡುವುದು. ವಿದ್ಯಾರ್ಥಿಗಳಮುಂದೆ ನಮ್ಮ ಆಚರಣೆ, ಸಂಪ್ರದಾಯ, ಮತ್ತುಸಂಸ್ಕೃತಿಯನ್ನು ಉಳಿಸಿ ಅದನ್ನು ಮುಂದುವರಿಸುವ ದೊಡ್ಡ ಜವಾಬ್ದಾರಿಇದೆ ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳೀ ಕೃಷ್ಣಕೆ.ಎನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ,ಕ್ರೀಡಾಕೂಟಗಳಲ್ಲಿ ವಿಜೇತರಾದ ಮತ್ತುಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನುವಿತರಿಸಲಾಯಿತು. ಕಾಲೇಜಿನ ಈ ಬಾರಿಯ ವಿದ್ಯಾರ್ಥಿ ಸಂಘದ ವರದಿಯನ್ನು ತೃತೀಯಬಿಕಾಂ ವಿದ್ಯಾರ್ಥಿ ಪವನ್ ರಾಜ್ ವಾಚಿಸಿದರು.ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣುಗಣಪತಿ ಭಟ್,ಆಡಳಿತ ಮಂಡಳಿಯ ಖಜಾಂಜಿ ಎಂ.ಶ್ರೀನಿವಾಸ ಸಾಮಂತ, ಆಡಳಿತಮಂಡಳಿಯ ಸದಸ್ಯರುಗಳಾದ ಜಗನ್ನಾಥ ಎ, ಶುಭ ಅಡಿಗ,ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ಹೆಚ್. ಜಿ ಶ್ರೀಧರ್, ಕಾಲೇಜಿನವಿಶೇಷ ಅಧಿಕಾರಿ ಡಾ. ಶ್ರೀಧರ್ ನಾಯ್ಕ್ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿ ಸಂಘದ ಅಧ್ಯಕ್ಷ ತೇಜಸ್ ಸ್ವಾಗತಿಸಿ,ಜೊತೆ ಕಾರ್ಯದರ್ಶಿ ಅನಿಷಾ ಎಮ್.ಎನ್ ವಂದಿಸಿ, ದ್ವಿತೀಯ ಎಂಕಾA ವಿದ್ಯಾರ್ಥಿನಿ ಸ್ವಾತಿ. ಎನ್ ಹಾಗೂ ತೃತೀಯ ಬಿಕಾಂ ವಿದ್ಯಾರ್ಥಿನಿ ಕೀರ್ತನಾ ನಿರ್ವಹಿಸಿದರು.

ಈ ಸಂದರ್ಭದಲ್ಲಿ ವಿಶೇಷ ಚೇತನ ವಿದ್ಯಾರ್ಥಿ ಪ್ರಥಮ ಬಿಎ ಯ ಸುಬ್ರಮಣ್ಯ ಇವರನ್ನು ಅಭಿನಂದಿಸಲಾಯಿತು.
ಮoಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್ಧರ್ಮ ಅವರನ್ನು ಕಾಲೇಜು ಪರವಾಗಿ ಮತ್ತು ವಿವೇಕಾನಂದ ಬಿ. ಎಡ್ಕಾಲೇಜು ಪರವಾಗಿ ಸನ್ಮಾನಿಸಲಾಯಿತು ಮತ್ತು ವಿಶೇಷ ಸಾಧನೆ ಮಾಡಿದ ಕಾಲೇಜಿನ ಉಪನ್ಯಾಸಕರನ್ನು ಗೌರವಿಸಲಾಯಿತು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು

Related News

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮವಿಭಾಗದಿಂದ ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣೆ-ವಿವೇಕ್ ಚೇತನ ೨೦೨೪

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮವಿಭಾಗದಿಂದ ರಾಷ್ಟ್ರೀಯ ಮಟ್ಟದ…

ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ಆಳ್ವಾಸ್ ಕಾಲೇಜು ಪುತ್ತೂರು.…

ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ Power Lifting ಸ್ಪರ್ದೆ ಯಲ್ಲಿ ಕಂಚಿನ ಪದಕ

ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ Power…

ಉಡುಪಿಯ, Thenkanidiyoor ನ ಸರಕಾರಿ ಪ್ರಥಮ ದರ್ಜೆ…

ವೃತ್ತಿ ಜೀವನವು ವಿದ್ಯಾರ್ಥಿ ಜೀವನಕ್ಕಿಂತ ಭಿನ್ನ

ವೃತ್ತಿ ಜೀವನವು ವಿದ್ಯಾರ್ಥಿ ಜೀವನಕ್ಕಿಂತ ಭಿನ್ನ

ವೃತ್ತಿ ಜೀವನವು ವಿದ್ಯಾರ್ಥಿ ಜೀವನಕ್ಕಿಂತ ಭಿನ್ನ. ವೃತ್ತಿ…