ಪುತ್ತೂರು: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ
ಹಿಂಸಾಚಾರವನ್ನು ವಿರೋಧಿಸಿ ಹಾಗೂ ಸಮಾಜದಲ್ಲಿ ರಾಷ್ಟ್ರೀಯ
ಜಾಗೃತಿಯನ್ನು ಮೂಡಿಸಲು ಪುತ್ತೂರಿನ ವಿವೇಕಾನಂದ
ವಿದ್ಯಾವರ್ಧಕ ಸಂಘ(ರಿ) ಇದರ ವತಿಯಿಂದ ನಡೆಸಲ್ಪಡುವ
ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಒಟ್ಟುಗೂಡಿ ಮಾನವ ಸರಪಳಿ
ಜಾಥಾ ಇಂದು ತೆಂಕಿಲದ ಶಾಲಾ ಆವರಣದಲ್ಲಿ ನಡೆಯಿತು.
ಮಾನವ ಸರಪಳಿ ಜಾಥಾಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ
ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮಕ್ಕೆ
ವಿವೇಕಾನಂದ ಕಾಲೇಜಿನ ಕ್ಯಾಂಪಸ್ಸಿನ ಮುಖ್ಯ ದ್ವಾರದ ಬಳಿ
ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ವಿವೇಕಾನಂದ
ವಿದ್ಯಾವರ್ಧಕ ಸಂಘದ ಕರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್
ಉಪಸ್ಥಿತರಿದ್ದರು.
ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜಿನ ಆವರಣದಿಂದ
ವಿದ್ಯಾರ್ಥಿಗಳು ಮಾನವ ಸರಪಳಿಯ ಮೂಲಕ ಹೊರಟು
ವಿವೇಕನಗರದ ತೆಂಕಿಲದಲ್ಲಿ ಇರುವ ವಿವೇಕಾನಂದ ಶಾಲಾ
ಆವರಣದಲ್ಲಿ ಒಟ್ಟಾಗಿ ಸಮಾಜದಲ್ಲಿ ಜನ ಜಾಗೃತಿಯನ್ನು ಮೂಡಿಸುವ
ಕರ್ಯವನ್ನು ಮಾಡಿದರು. ಜಾಥಾದುದ್ದಕ್ಕೂ ವಿದ್ಯಾರ್ಥಿಗಳು ಬಾಂಗ್ಲಾ
ವಿರುದ್ಧ ಘೋಷಣೆಯನ್ನು ಕೂಗುತ್ತಾ ರಾಷ್ಟಿçÃಯ
ಜಾಗೃತಿಯನ್ನು ಮೂಡಿಸುವ ಭಿತ್ತಿಪತ್ರಗಳನ್ನು ಹಿಡಿದು
ಸಾಗಿದರು.
ಹಾಗೂ ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿವೇಕಾನಂದ
ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿವಿಧ
ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು,
ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹಾಗೂ
ಸುಮಾರು ಹತ್ತು ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದರು.