News & Updates

ವಿವೇಕಾನಂದ ವಿದ್ಯಾವರ್ಧಕ ಸಂಫದಲ್ಲಿ 45ನೇ ವರ್ಷದಗಣೇಶೋತ್ಸವವೈಭವದ ಶೋಭಾಯಾತ್ರೆಗೆ ಸಾಕ್ಷಿಯಾದ 7000ಕ್ಕೂ ಹೆಚ್ಚುವಿದ್ಯಾರ್ಥಿಗಳು;

ಪುತ್ತೂರು, ಸೆ. 16: ನೆಹರು ನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ)
ವತಿಯಿಂದ 45ನೇ ವರ್ಷದ ಗಣೇಶೋತ್ಸವ ಸಂಭ್ರಮ ವಿಜೃಂಭಣೆಯಿoದ
ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ
ಕಾರ್ಯಾಚರಿಸುತ್ತಿರುವ ವಿವಿಧ ವಿದ್ಯಾಸಂಸ್ಥೆಗಳು ಜೊತೆಯಾಗಿ ಸೆ.14 ರಿಂದ
ಸೆ.16ರವರೆಗೆ ಕಾಲೇಜಿನ ಕೇಶವ ಸಂಕಲ್ಪ ಸಭಾಭವನಲ್ಲಿ
ಗಣೇಶೋತ್ಸವವನ್ನು ಆಚರಿಸಲಾಯಿತು.

ಈ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ
ಭಾಗವಹಿಸಿ ಧಾರ್ಮಿಕ ಉಪನ್ಯಾಸವನ್ನು ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಅಖಿಲ
ಭಾರತೀಯ ಸಾಹಿತ್ಯ ಪರಿಷದ್‌ನ ಕಾರ್ಯದರ್ಶಿ ಲತೇಶ್ ಬಾಕ್ರಬೈಲು ಮಾತನಾಡಿ,
ಸಮಾಜದಲ್ಲಿರುವ ನೂರಾರು ಒಡಕುಗಳನ್ನು ದೂರಗೊಳಿಸಿ,
ಪ್ರತಿಯೊಬ್ಬರನ್ನು ಒಂದುಗೂಡಿಸುವ ಉದ್ದೇಶದಿಂದ ಆಚರಣೆಗೆ ಬಂದ ಹಬ್ಬ ಚೌತಿ.
ರಾಷ್ಟಿçÃಯತೆ ಮತ್ತು ಧರ್ಮ ಒಂದೇ ಎಂದು ನಂಬಿದ ಪರಂಪರೆ ಭಾರತದ್ದು.
ತ್ಯಾಗ ಪರಂಪರೆಯನ್ನು ಹೊಂದಿರುವ ಭಾರತೀಯರು ಸಮಾಜಕ್ಕಾಗಿ
ಧಾರ್ಮಿಕತೆಯ ನಡುವೆ ಬದುಕಿದವರು. ಇದರಲ್ಲಿ ಪ್ರಮುಖ ಪಾತ್ರ
ವಹಿಸಿರುವುದು ಪಂಚ ಪರಿವರ್ತನೆ ಎಂಬ ವಿಷಯ. ಅದು ನಮ್ಮ ಮನೆಗಳಿಂದಲೇ
ಆರoಭವಾದಾಗ ಮಾತ್ರ ಸಮಾಜ ಮತ್ತು ದೇಶ ಬೆಳೆಯಲು ಸಾಧ್ಯ ಎಂದು
ಹೇಳಿದರು.

ವಿವೇಕಾನoದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟಿçÃಯ ಮತ್ತು ಹಿಂದೂ
ಧಾರ್ಮಿಕತೆಯ ಕೊರತೆಯನ್ನು ನೀಗಿಸಿ, ಧಾರ್ಮಿಕ ಪದ್ಧತಿಗಳನ್ನು
ಉಳಿಸಿಕೊಳ್ಳಲು ಚೌತಿ ಆಚರಣೆ ಒಂದು ಉತ್ತಮ ದಾರಿ. ರಾಷ್ಟಿçÃಯ ಜಾಗೃತಿಯ
ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತಿದಾಗ ಪರಿವರ್ತನೆಯ ಆಶಯಗಳು
ಸುಲಭವಾಗಿ ತಲುಪುತ್ತವೆ. ವಿದ್ಯಾರ್ಥಿಗಳಲ್ಲಿ ಧಾರ್ಮಿಕ ನಂಬಿಕೆ ಮತ್ತು ಧರ್ಮದ
ಭಾವನೆಯನ್ನು ಬೆಳೆಸುವಲ್ಲಿ ಗಣೇಶೋತ್ಸವ ಒಂದು ಪ್ರಮುಖ ಆಚರಣೆಯಾಗಿ
ಪಾತ್ರ ವಹಿಸಿದೆ ಎಂದರು.


ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯ
ನಾರಾಯಣ ಕೆ.ಎಂ, ವಿವೇಕಾನಂದ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ,
ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್,
ವಿವೇಕಾನಂದ ಶ್ರೀ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ, ವಿವೇಕಾನಂದ ಪದವಿ
ಪೂರ್ವ ಕಾಲೇಜಿನ ಆಂಗ್ಲ ವಿಭಾಗದ ಉಪನ್ಯಾಸಕ ಪರಮೇಶ್ವರ ಶರ್ಮಾ ಪಿ.ಕೆ
ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ
ಮುಖ್ಯಸ್ಥ ಡಾ. ಮನಮೋಹನ ಎಂ. ಸ್ವಾಗತಿಸಿ, ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ
ದೀಪ್ತಿ ಪ್ರಭು ಪ್ರಾರ್ಥಿಸಿದರು. ವಿವೇಕಾನಂದ ಪದವಿ ಕಾಲೇಜಿನ ಭಾರತೀಯ ಸಂಸ್ಕೃತಿ
ಮತ್ತು ಲಲಿತಕಲಾ ಅಧ್ಯಯನ ಕೇಂದ್ರದ ಸಂಯೋಜಕಿ ಹಾಗೂ ಸಮಾಜಶಾಸ್ತç
ವಿಭಾಗದ ಮುಖ್ಯಸ್ಥೆ ಡಾ.ವಿದ್ಯಾ ಎಸ್. ವಂದಿಸಿ, ತೃತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅವನಿ
ಕೆ. ಮತ್ತು ಸುಮನಾ ನಿರೂಪಿಸಿದರು.

ಗಣಪತಿ ಹವನ, ರಂಗಪೂಜೆ, ಸರ್ವಸೇವೆ, ಮಹಾಪೂಜೆ, ಹರಕೆ ಸೇವೆ, ವಿದ್ಯಾರಕ್ಷೆ,
ಕರ್ಪೂರಾರತಿ ಸೇವೆಗಳು ನಡೆದವು. ಭಕ್ತರು ಗಣೇಶನಿಗೆ ಸ್ವಯಂ ಆರತಿ
ಬೆಳಗುವ ಅವಕಾಶ ಕಲ್ಪಿಸಲಾಗಿತ್ತು.
ಮೂರು ದಿನಗಳ ಕಾಲ ನಡೆದ ಈ ಆಚರಣೆಯಲ್ಲಿ ವಿವೇಕಾನಂದ ಪದವಿ ಪೂರ್ವ
ಕಾಲೇಜು, ತೆಂಕಿಲ ವಿವೇಕಾನಂದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ, ಅರ್ಕ
ಕೊಡಿಪ್ಪಾಡಿ ಮಹಾದೇವಿ ಭಜನಾ ಮಂಡಳಿ, ಕುಂಟ್ಯಾನ ಭ್ರಾಮರಿ ಭಜನಾ ತಂಡ,
ವಿವೇಕಾನoದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಟಿಕಲ್ ಸೈನ್ಸಸ್, ವಿವೇಕಾನಂದ ಪದವಿ
ಕಾಲೇಜು (ಸ್ವಾಯತ್ತ), ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂಡಳಿ,
ಕಬಕ ಶ್ರೀ ಮಹಾದೇವಿ ಮಹಿಳಾ ಮಂಡಳಿ, ವಿವೇಕಾನಂದ ಕಾಲೇಜು ಆಫ್ ಇಂಜಿನಿಯರ್
ಆ್ಯoಡ್ ಟೆಕ್ನಾಲಜಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯ, ವಿವೇಕಾನಂದ
ಪಾಲಿಟೆಕ್ನಿಕ್ ಕಾಲೇಜು, ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜುಗಳಿಂದ ವಿವಿಧ
ಸಾಂಸ್ಕೃತಿಕ ಮತ್ತು ಭಜನಾ ಕಾರ್ಯಕ್ರಮಗಳು ನಡೆದವು.
ವೇದಿಕೆಯಲ್ಲಿ ವಿವೇಕಾನಂದ ಪದವಿ ಪತ್ರಿಕೋದ್ಯಮ ವಿಭಾಗದ ಪ್ರಾಯೋಗಿಕ
ಪತ್ರಿಕೆ ವಿಕಸನ ಮತ್ತು ಸ್ನಾತಕೋತ್ತರ ಸಂಮೂಹ ಸಂವಹನ ಮತ್ತು
ಪತ್ರಿಕೋದ್ಯಮ ವಿಭಾಗದ ವಿಕಾಸ ಪ್ರಾಯೋಗಿಕ ಪತ್ರಿಕೆ ಮತ್ತು ವಿನೂತನ
ಪಾಕ್ಷಿಕ ಪತ್ರಿಕೆಯ ಗಣೇಶೋತ್ಸವದ ವಿಶೇಷ ಸಂಚಿಕೆಗಳನ್ನು
ಬಿಡುಗಡೆಗೊಳಿಸಲಾಯಿತು.

ರೀಲ್ಸ್ ಮೇಕಿಂಗ್ ಸ್ಪರ್ಧೆ
45ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ರೀಲ್ಸ್ ಮೇಕಿಂಗ್
ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿನಿ ಸಹನಾ ಕೋಲ್ಪೆ
(ಪ್ರಥಮ), ಸ್ವಸ್ತಿಕ್.ಎಂ (ದ್ವಿತೀಯ) ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ
ವಿದ್ಯಾರ್ಥಿ ಸುಮಂತ್ ಪಿ.(ತೃತೀಯ) ಸ್ಥಾನ ಪಡೆದರು. ಅನಿಮೇಟೆಡ್ ರೀಲ್ಸ್ ಸ್ಪರ್ಧೆಯಲ್ಲಿ
ಹರ್ಷಿತ್ ಎಂ.ಬಿ ಪ್ರಥಮ ಸ್ಥಾನ ಪಡೆದುಕೊಂಡರು.

ಪುಸ್ತಕ ಹಬ್ಬ
ಮುಖ್ಯ ಆಕರ್ಷಣೆಯಾಗಿ ಮಂಗಳೂರು ಸಾಹಿತ್ಯ ಕೇಂದ್ರದ ಆಶ್ರಯದಲ್ಲಿ
ಪುಸ್ತಕ ಹಬ್ಬ ನಡೆಯಿತು. ಇಲ್ಲಿ ಮಕ್ಕಳ ಸಣ್ಣ ಕತೆಗಳು, ತುಳುನಾಡಿನ ಐತಿಹಾಸಿಕ
ಕಥೆ ಪುಸ್ತಕಗಳು, ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಹೀಗೆ 330ಕ್ಕಿಂತಲೂ
ಹೆಚ್ಚಿನ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು. ಈ ಪುಸ್ತಕ
ಹಬ್ಬಕ್ಕೆ ವಿದ್ಯಾರ್ಥಿಗಳಿಂದ, ಶಿಕ್ಷಕರಿಂದ ಹಾಗೂ ಭಕ್ತರಿಂದ ಉತ್ತಮ ಪ್ರತಿಕ್ರಿಯೆ
ದೊರಕಿತು.

ಶೋಭಾ ಯಾತ್ರೆ
ಸೆ.16ರಂದು ಸಂಜೆ ಗಣಪತಿಯ ಶೋಭಾ ಯಾತ್ರೆಯೂ ನಗರದ ವಿವೇಕಾನಂದ
ಕ್ಯಾoಪಸ್‌ನಿAದ ಆರಂಭಗೊoಡು ಬೊಳುವಾರು ಮಾರ್ಗವಾಗಿ ಸಾಗಿ ಹಾರಾಡಿಯಲ್ಲಿ
ಗಣೇಶನ ಮೂರ್ತಿಯನ್ನು ವಿಸರ್ಜನೆಗೊಳಿಸುವ ಮೂಲಕ ಗಣೇಶೋತ್ಸವ
ಸಂಪನ್ನಗೊoಡಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವಿಧ ವಿದ್ಯಾಸಂಸ್ಥೆಗಳ
7000ಕ್ಕೂ ಅಧಿಕ ವಿದ್ಯಾರ್ಥಿಗಳು ಭವ್ಯ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು.
ವಿದ್ಯಾರ್ಥಿ ತಂಡಗಳಿoದ ಚಂಡೆ, ಕುಣಿತ ಭಜನೆ, ಹುಲಿವೇಷ, ಟ್ಯಾಬ್ಲೋ ಹಾಗೂ
ಹಲವು ವಾದನಗಳೊಂದಿಗೆ ಗಣಪತಿಯ ಮೆರವಣಿಗೆ ಸಾಗಿತು.

Related News

ವಿವೇಕಾನಂದ ವಿದ್ಯಾವರ್ಧಕ ಸಂಫದಲ್ಲಿ 45ನೇ ವರ್ಷದಗಣೇಶೋತ್ಸವವೈಭವದ ಶೋಭಾಯಾತ್ರೆಗೆ ಸಾಕ್ಷಿಯಾದ 7000ಕ್ಕೂ ಹೆಚ್ಚುವಿದ್ಯಾರ್ಥಿಗಳು;

ವಿವೇಕಾನಂದ ವಿದ್ಯಾವರ್ಧಕ ಸಂಫದಲ್ಲಿ 45ನೇ ವರ್ಷದಗಣೇಶೋತ್ಸವವೈಭವದ…

ಪುತ್ತೂರು, ಸೆ. 16: ನೆಹರು ನಗರದ ವಿವೇಕಾನಂದ…

ವಿವೇಕಾನಂದ ಮಹಾವಿದ್ಯಾಲಯದಲ್ಲಿ ‘ಎಥಿಕಲ್ ಹ್ಯಾಕಿಂಗ್’ ವಿಶೇಷ ಕಾರ್ಯಗಾರಹ್ಯಾಕಿಂಗ್ ತಂತ್ರಜ್ಞಾನದ ಅಭಿವೃದ್ಧಿಗೆ ಮುಖ್ಯ ಅಡಿಪಾಯವಾಗಿದೆ- ಸಮರ್ಥ್ಭಾಸ್ಕರ್ ಭಟ್;

ವಿವೇಕಾನಂದ ಮಹಾವಿದ್ಯಾಲಯದಲ್ಲಿ ‘ಎಥಿಕಲ್ ಹ್ಯಾಕಿಂಗ್’ ವಿಶೇಷ…

ಪುತ್ತೂರು,ಸೆ.11: ಇಂದಿನ ಕಾಲಘಟ್ಟದಲ್ಲಿ ಹ್ಯಾಕಿಂಗ್ ತಂತ್ರಜ್ಞಾನದ ಅಭಿವೃದ್ಧಿಯಪ್ರತಿಬಿಂಬವಾಗಿದೆ.…

ವಿವೇಕಾನಂದ ಕಾಲೇಜಿನಲ್ಲಿ ‘ಅನ್ಲಾಕಿಂಗ್ ಆಪರ್ಚುನಿಟಿಸ್’ ವಿಶೇಷ ಕಾರ್ಯಾಗಾರ;

ವಿವೇಕಾನಂದ ಕಾಲೇಜಿನಲ್ಲಿ ‘ಅನ್ಲಾಕಿಂಗ್ ಆಪರ್ಚುನಿಟಿಸ್’ ವಿಶೇಷ…

ಪುತ್ತೂರು,ಸೆ.10: ಪದವಿ ಶಿಕ್ಷಣವು ಒಂದು ಮೆಟ್ಟಿಲು ಮಾತ್ರ.…