VIVEKANANDA COLLEGE of Arts, Science and Commerce (Autonomous) Puttur

Re - accredited at 'A' Grade by the NAAC with 3.30 CGPA

Recognised as the College with Potential for Excellence (CPE) by the UGC

| +91 8251 230 455 | Kannada

ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ವಿಜ್ಞಾನಿ ಅಭಿವೃದ್ಧಿಯಾಗಬೇಕು: ಸೇಡಿಯಾಪು ಜನಾರ್ಧನ ಭಟ್

ಪುತ್ತೂರು ಫೆ.೧೨: ಕೃಷಿಕನಾಗುವವನು ಮೊದಲು ಯಾವ ಜಾಗದಲ್ಲಿ ಯಾವ ಬೆಳೆಯನ್ನು ಬೆಳೆದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳಬೇಕು. ನಂತರ ಅದರಲ್ಲಿ ಬೆಳೆದ ಫಲವನ್ನು ಮೌಲ್ಯವನ್ನು ವರ್ಧಿಸುವ ಕಲೆ ತಿಳಿದಿರಬೇಕು. ಆಗ ಮಾತ್ರ ಕೃಷಿಕನಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಸೇಡಿಯಾಪು ಜನಾರ್ಧನ ಭಟ್ ಹೇಳಿದರು.


ಕಾಲೇಜಿನ ಸಸ್ಯಶಾಸ್ತ್ರ ವಿಭಾಗ , ನೇಚರ್ ಕ್ಲಬ್ ಮತ್ತು ಐಕ್ಯುಎಸಿ ಘಟಕಗಳ ಆಶ್ರಯದಲ್ಲಿ ಆಯೋಜಿಸಿದ ‘ಅಂತರಾಷ್ಟ್ರೀಯ ಹಣ್ಣು ಮತ್ತು ತರಕಾರಿಗಳ ವರ್ಷ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಶುಕ್ರವಾರ ಅವರು ಮಾತನಾಡಿದರು.
ನಮ್ಮಲ್ಲಿ ಹಲವಾರು ಔಷಧೀಯ ಗಿಡಗಳು ಇವೆ. ಅದನ್ನು ಸಂಗ್ರಹಿಸಿ, ಯಾವುದಾದರೂ ರೋಗಕ್ಕೆ ಔಷಧಿಯನ್ನು ಮಾಡುವ ಪ್ರಯತ್ನ ವಿದ್ಯಾರ್ಥಿಗಳು ಮಾಡಬೇಕು. ಆಗ ಮಾತ್ರ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ವಿಜ್ಞಾನಿ ಎಚ್ಚೆತ್ತುಕೊಳ್ಳುತ್ತಾನೆ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಮಾತನಾಡಿ, ಈಗಿನ ಯುವಜನಾಂಗ ಹೊರಗಿನ ಆಹಾರಕ್ಕೆ ಮರುಳಾಗಿದ್ದಾರೆ. ಇದರಿಂದ ನಮ್ಮಲ್ಲಿರುವ ಪೌಷ್ಟಿಕಾಂಶ ಕಡಿಮೆಯಾಗುವುದಲ್ಲದೆ, ಹಲವಾರು ರೋಗಗಳಿಗೆ ದಾರಿ ಮಾಡಿ ಕೊಟ್ಟ ಹಾಗೆ ಆಗುತ್ತದೆ. ಆದ್ದರಿಂದ ಮನೆಯಲ್ಲೇ ಸಣ್ಣ ಕೃಷಿ ಮಾಡಿ, ಅದರಲ್ಲಿ ಬೆಳೆದ ತರಕಾರಿಗಳನ್ನು ಸೇವಿಸುವುದರಿಂದ ಪೌಷ್ಟಿಕಾಂಶದ ಜೊತೆಗೆ ರೋಗ ನಿರೋಧಕ ಶಕ್ತಿಯು ವೃದ್ಧಿಸುತ್ತದೆ ಎಂದರು.
ವಿದ್ಯಾರ್ಥಿಗಳಾದ ಸಾಯಿರೂಪ, ವೀಣಾ ಶಾರದಾ ಮತ್ತು ವಿದ್ಯಾಶ್ರೀ ಪ್ರಾರ್ಥಿಸಿ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ ಗಣರಾಜ್ ಭಟ್ ಸ್ವಾಗತಿಸಿದರು. ವಿದ್ಯಾರ್ಥಿನಿ ಶೈಣಿ ಕೆ.ಆರ್. ವಂದಿಸಿ, ಮೋನಿಷ ಎ.ಎಂ. ಕಾರ್ಯಕ್ರಮವನ್ನು ನಿರೂಪಿಸಿದರು.