ಹೊಸ ಶಿಕ್ಷಣ ನೀತಿಯಿಂದ ಜಿಡಿಪಿಯನ್ನು ಉನ್ನತೀಕರಣಗೊಳಿಸಬಹುದು-ಶ್ರೀಮತಿ ರೂಪಲೇಖ
ಪುತ್ತೂರು; ಅ12; ಹೊಸ ಶಿಕ್ಷಣ ನೀತಿಯು ಕೌಶಲ್ಯ ವೃತ್ತಿಗೆ ಒತ್ತು ನೀಡುವುದರಿಂದ ಉದ್ಯೋಗವಕಾಶವನ್ನು ವಿಫುಲವಾಗಿ ನೀಡಬಹುದು ಈ ರೀತಿಯ ಬೆಳವಣಿಗೆಗಳು ಆದಾಗ ಜಿಡಿಪಿಯಲ್ಲಿಯೂ ಬದಲಾವಣೆಯಾಗಲು ಸಾಧ್ಯ ಎಂದು ಪುತ್ತೂರಿನ ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೂಪಕಲಾ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದ ಸಂಸ್ಕ್ರತಿ-ಪ್ರಸ್ತುತಿ ಎರಡನೇಯ ಸರಣಿ ಕಾರ್ಯಕ್ರಮದಲ್ಲಿ ಸಮನ್ವಯಕಾರರಾಗಿ ಭಾಗವಹಿಸಿ ಶಿಕ್ಷಣದಿಂದ ಜಿಡಿಪಿಯನ್ನು ಹೆಚ್ಚಿಸಲು ಸಾಧ್ಯವೇ ಎನ್ನುವುದರ ಬಗೆಗೆ ಮಾಹಿತಿಯನ್ನು ನೀಡಿದರು ಅಲ್ಲದೇ ಕಾರ್ಯಕ್ರಮದಲ್ಲಿ ಮಹಿಳೆ-ಆರ್ಥಿಕತೆ ಹಾಗೂ ಅಭಿವೃದ್ಧಿ ಎಂಬ ವಿಚಾರದ ಬಗೆಗೂ ಮಾತನಾಡಿದ ಇವರು ಇತ್ತೀಚೆಗೆ ಮಹಿಳೆಯರು ಸ್ವಾವಲಂಭಿಗಳಾಗುತ್ತಿದ್ದಾರೆ ಹಾಗೂ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಹೀಗಿರುವಾಗ ಮಹಿಳೆಯ ಮೇಲಿರುವ ಕೀಳರಿಮೆ ಹಾಗೂ ಮನಸ್ಥಿತಿಯನ್ನು ನಾವಿಂದು ಬದಲಾಯಿಸಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಅನ್ನಪೂರ್ಣ ಇವರು ಮಹಿಳೆ-ಆರ್ಥಿಕತೆ ಹಾಗೂ ಅಭಿವೃದ್ಧಿಯ ಬಗೆಗೆ ಮಾತನಾಡಿ ಹೆಣ್ಣಿನ ಮೇಲೆ ನಡೆಯುವ ಶೋಷಣೆಗಳು ನಿಲ್ಲಬೇಕು ಹಾಗೂ ಆಕೆ ಆರ್ಥಿಕವಾಗಿ, ಮಾನಸಿಕವಾಗಿ ಸದೃಢಳಾಗಿ ಸ್ವಾವಲಂಭಿಯಾಗಬೇಕಿದೆ ಎಂದರು. ಇದೇ ಸಂದರ್ಭದಲ್ಲಿ ವಾಣಿಜ್ಯ ವಿಬಾಗದ ಉಪನ್ಯಾಸಕಿ ಶ್ರೀಮತಿ ವಿನುತಾ ಇವರು ಶಿಕ್ಷಣದಿಂದ ಜಿಡಿಪಿಯನ್ನು ಹೆಚ್ಚಿಸಲು ಸಾಧ್ಯವೇ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿ, ಇಂದು ನಮ್ಮಲ್ಲಿ ಸಾಕ್ಷರತೆಯ ಪ್ರಮಾಣ ಹೆಚ್ಚಾಗಿದ್ದು ಎಲ್ಲರೂ ಉದ್ಯೋಗವನ್ನು ಮಾಡುತಿದ್ದಾರೆ ಅಲ್ಲದೇ ಇಂದಿನ ಹೊಸ ಶಿಕ್ಷಣ ನೀತಿಯಿಂದ ಜಿಡಿಪಿಯನ್ನು ಉನ್ನತಗೊಳಿಸಲು ಸಾಧ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ.ವಿ.ಜಿ.ಭಟ್, ಸಮನ್ವಯಕಾರರಾದ ಶ್ರೀಮತಿ ರೂಪಕಲಾ ಹಾಗೂ ಉಪನ್ಯಾಸಕಿಯರಾದ ಶ್ರೀಮತಿ ಅನ್ನಪೂರ್ಣ ಹಾಗೂ ಶ್ರೀಮತಿ ವಿನುತಾ ಇವರು ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಜ್ಯೋತಿ ಇವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.