News & Updates

ಕೈಝೆನ್ ಪರಿಕಲ್ಪನೆಯಿಂದ ಆತ್ಮವಿಶ್ವಾಸ ವೃದ್ಧಿ— ರಂಜನ್ ಬೆಳ್ಳಾರ್ಪಾಡಿ;

ಪುತ್ತೂರು, ಅಕ್ಟೋಬರ್ 16:

ಭಾರತ ದೇಶ ಮುಂದುವರಿದ ದೇಶವಾದರೂ ಸ್ವಚ್ಛತೆಯ ವಿಚಾರವಾಗಿ ಯೋಚಿಸುವಂತಾಗಿದೆ. ಸ್ವಚ್ಛತೆಯನ್ನು ಪಾಲಿಸುವ ಕೆಲಸ ಅಗತ್ಯವಾಗಿ ಆಗಬೇಕು. ಯುವ ಜನತೆಗೆ ಅವಕಾಶಗಳೂ ಹೆಚ್ಚಿದ್ದು ಸ್ವಚ್ಛತೆಯ ವಿಷಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರಬಹುದು. ನಮ್ಮ ಸಕ್ರಿಯತೆ ಹಾಗೂ ಅರಿವು ಮೂಡಿಸುವ ಪ್ರಕ್ರಿಯೆ ಸಾಮಾಜಿಕ ಜಾಲತಾಣಗಳಲ್ಲಷ್ಟೇ ಆಗಬಾರದು. ಸ್ವತಃ ನಮ್ಮ ಮನೆ ಹಾಗೂ ಪರಿಸರವನ್ನು ಶುಚಿಯಾಗಿಟ್ಟಾಗ ಒಳ್ಳೆಯ ಫಲವನ್ನು ಕಾಣಲು ಸಾಧ್ಯ ಎಂದು ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಸಂಯೋಜಕ ರಂಜನ್ ಬೆಳ್ಳಾರ್ಪಾಡಿ ನುಡಿದರು.

ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘ ನಿ. ಪುತ್ತೂರು ಹಾಗೂ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಇದರ ಸಹಭಾಗಿತ್ವದೊಂದಿಗೆ ನಡೆದ ಸತ್ಯೇಶ ಕೆದಿಲಾಯ ಸಂಕಲಿತ ‘ಸ್ವಚ್ಛತೆಯ ಪಂಚಸೂತ್ರಗಳು ಹಾಗೂ ಕೈಝೆನ್’ ಕೃತಿ ಬಿಡುಗಡೆ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಾವು ಯಾವ ಕಾರ್ಯವನ್ನಾದರೂ ಸಾಧಿಸುತ್ತೇವೆ ಎಂಬ ವಿಶ್ವಾಸ ಇರಬೇಕು. ಕೈಝೆನ್ ಪರಿಕಲ್ಪನೆ ಆತ್ಮವಿಶ್ವಾಸ ಹೆಚ್ಚಿಸುಲು ನೆರವಾಗುತ್ತದೆ ಎಂದರು‌.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಮಾತನಾಡಿ ಸ್ವಚ್ಛತೆ ಎಂಬುದು ನಮ್ಮ ಮನಸು, ಭಾವನೆಗಳು ಹಾಗೂ ನೋಡುವ ದೃಷ್ಠಿಕೋನಗಳಿಗೂ ಸಂಬಂಧಿಸಿದ್ದಾಗಿರುತ್ತದೆ. ಮನಸ್ಸೂ ಸ್ವಚ್ಛವಾಗಿದ್ದು ಹೊರಗಿನ ಪರಿಸರವೂ ಸ್ವಚ್ಛವಾಗಿರುವುದು ದೇಶವೊಂದು ಮಾದರಿಯಾಗುವುದರಲ್ಲಿ ಪ್ರಧಾನವಾಗುತ್ತದೆ. ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ನಿರ್ವಹಿಸಲು ಪುಸ್ತಕಗಳು ಮಾರ್ಗದರ್ಶಿಯಾಗಬಲ್ಲದು ಎಂದರು.

ಅಧ್ಯಕ್ಷೀಯ ನುಡಿಗಳನ್ನಾಡಿದ ಪುತ್ತೂರು ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘದ ನಿರ್ದೇಶಕ ಹಾಗೂ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟಿನ ಟ್ರಸ್ಟೀ ದೇವೀಪ್ರಸಾದ್.ಕೆ ಗುರಿ ತಲುಪಲು ಶಿಸ್ತು ಪಾಲನೆ ಹಾಗೂ ಆತ್ಮವಿಶ್ವಾಸ ಇರಬೇಕಾಗುತ್ತದೆ. ಸ್ವಚ್ಛತೆ ನಮ್ಮ ದೈನಂದಿನ ಅಭ್ಯಾಸವಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸತ್ಯೇಶ ಕೆದಿಲಾಯ ಹಾಗೂ ರಂಜನ್ ಬೆಳ್ಳಾರ್ಪಾಡಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ ನಾಯಕ್.ಬಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ.ಶ್ರೀಕೃಷ್ಣ ಗಣರಾಜ ಭಟ್ ಸ್ವಾಗತಿಸಿ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟಿನ ಸಂಯೋಜಕ ಬಿಪಿನ್ ಚಂದ್ರ ವಂದಿಸಿದರು.
ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಚೈತನ್ಯ ನಿರ್ವಹಿಸಿದರು.

Related News

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಜಾಗೃತಿ ಅಭಿಯಾನ;

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’…

ಪುತ್ತೂರು, ನ. 24; ನಶೆ ಮತ್ತು ಮದ್ಯವ್ಯಸನ…

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ. ರಾಜೇಶ್ವರಿ ಎಂ:ಇoಟರ್ನೆಟ್ ಆಫ್ ಥಿಂಗ್ಸ್ (ಐಓಟಿ) ಹ್ಯಾಂಡ್ಸ್-ಆನ್ ಕಾರ್ಯಾಗಾರ ಉದ್ಘಾಟನೆ;

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ.…

ಪುತ್ತೂರು ನ.24: ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಆಫ್…

ವಿವೇಕಾನಂದ ಕಾಲೇಜಿನಲ್ಲಿ ಪರಿಸರ ರಕ್ಷಣಾದಿನಾಚರಣೆ ಹಾಗೂ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಪರಿಸರ ರಕ್ಷಣಾದಿನಾಚರಣೆ ಹಾಗೂ…

ಪುತ್ತೂರು. ನ. 22: ಮನುಷ್ಯ ಯಾವಾಗ ನೈತಿಕ…